ಸಂಪದದಲ್ಲಿ ಹೊಸತು! | Sign up | Login | Font Help
Planet Kannada | ಪ್ಲಾನೆಟ್ ಕನ್ನಡ
  • Sampada Initiative
  • Kannada Learning Center
  • Sampada Community
  • ಸಂಪರ್ಕಿಸಿ
Home › ಪ್ಲಾನೆಟ್ ಕನ್ನಡ

Someಕನಸು

Syndicate content
ಜಂಗಮ ಮತ್ತು ಸ್ಥಾವರಗಳ ನಡುವಿನ ಹೊಯ್ದಾಟ: ಮಾತು, ಮೌನ, ಕನವರಿಕೆ ಇದೇ "ಬದುಕು"
URL: http://somekanasu.wordpress.com
Updated: 8 min 43 sec ago

ಬನ್ನಿ ತಗೊಂಡು ಬಂಗಾರದಂಗ ಇರೂಣು: ದಸರೆಯಲ್ಲಿ ಊರ ನೆನಪು

Wed, 2008-10-08 14:34

ಮತ್ತೊಂದು ವಿಜಯದಶಮಿ ಊರಿಂದ ದೂರ ಅಚರಿಸಬೇಕಾಗಿದೆ, ಸುಮಾರು ೩-೪ ವರ್ಷಗಳಾಯಿತು ದಸರೆಗೆ ಊರಿಗೆ ಹೋಗದೆ. ದಸರಾ ಹಬ್ಬ ಕರ್ನಾಟಕದ ನಾಡಹಬ್ಬವಾಗಿದ್ದರೂ ಆಚರಣೆಯಲ್ಲಿ ಪ್ರದೇಶ ವ್ಯತ್ಯಾಸ ಕಾಣಬಹುದು.

ಉತ್ತರ ಕರ್ನಾಟಕದ ದಸರೆಯ ಆಚರಣೆಯಲ್ಲಿ “ಬನ್ನಿ”ಗೆ ತನ್ನದೆ ಹಿರಿದಾದ ಅರ್ಥವಿದೆ, ದಸರೆಯಲ್ಲಿ “ಬನ್ನಿ” ಕೆವಲ ಪತ್ರೆಯಲ್ಲ, ಅದು “ಬಂಗಾರ” ಹೀಗಾಗಿ ದಸರೆಯ ಹಬ್ಬ ನಮಗಲ್ಲಿ “ಬನ್ನಿ ಹಬ್ಬ”.

“ಬನ್ನಿ ತಗೊಂಡು ಬಂಗಾರದಂಗ ಇರೂಣು”, “ಬಂಗಾರ ತಗೊಂಡು ಬಂಗಾರದಂಗ ಇರೂಣು” ಬರಿ ಮಾತುಗಳಲ್ಲ, ಶತ್ರುಗಳು ಎದುರಾದರೂ ಆವತ್ತು ನಕ್ಕೊತ “ಬನ್ನಿ ತಗೊಂಡು ಬಂಗಾರದಂಗ ಇರೂಣು”, ಇದರಿಂದಾಗಿ ಅನೇಕ ಒಡೆದ, ಮುರುಟಿದ ಮನಸ್ಸುಗಳು ಒಂದಾದ ಸಾಕ್ಷ್ಯಗಳು ಅನೇಕ, ಒಡೆದ ಮನಸ್ಸುಗಳನ್ನು ಒಂದಾಗಿಸುವ, ಮುರಿದ ಸಂಭಂದಗಳನ್ನು ಬೇರೆಸುವ ಈ ಹಬ್ಬ ಒಂದು ರೀತಿಯಲ್ಲಿ “ವಿಜಯದಶಮಿ”ಯೇ ಸರಿ, ಎಕೆಂದರೆ ಕ್ಷಮೆ ಕೇಳಿದವನು ಮತ್ತು ಕ್ಷಮಿಸಿದವನು ಇಬ್ಬರೂ ಗೆದ್ದ ದಿನ, ಹಾಗೆಯೇ ಹೋಸ ಗೆಳೆತನ ಮತ್ತು ಸಂಭಂದಕ್ಕೆ ಮೊದಲದಿನ.

ನವರಾತ್ರಿಯ ಮೊದಲ ದಿನದಿನದಿಂದಲೆ ಪ್ರತಿದಿನ ಬೆಳೆಗ್ಗೆ ಬನ್ನಿ ಮಂಟಪ(ಬನ್ನಿ ಗಿಡ)ಕ್ಕೆ ಹೋಗಿ ಪೂಜಿಸಿ, ಮಂಟಪ ಸುತ್ತು ಹಾಕಿ ಬರುತ್ತಾರೆ, ಮನೆಗಳಲ್ಲಿ ನವಧಾನ್ಯಗಳ ಸಸಿ ನೆಟ್ಟು, ಬಿಂದಿಗೆಯಲ್ಲಿ ನೀರು ತುಂಬಿ ಪೂಜಿಸುತ್ತಾರೆ, ಇದಕ್ಕೆ ಘಟ್ಟ ಹಾಕುವುದು ಎನ್ನುತ್ತಾರೆ, ಈ ಒಂಬತ್ತು ದಿನಗಳು ಪ್ರತಿದಿನವೂ ದೇವಿ ಪಾರಾಯಣ.

ಆಯುಧ ಪೂಜೆ ನನಗೆ ಮೊದಲಿನಿಂದಲೂ ಇಷ್ಟದ ದಿನ ಎಕೆಂದರೆ, ಆವತ್ತು ರೈತರು ತಮ್ಮ ನೇಗಿಲು, ಎತ್ತು, ಚಕ್ಕಡಿ, ಹಾರಿ, ಗುದ್ದಲಿ, ಕುಡುಗೋಲು ಪೂಜಿಸಿದರೆ, ವ್ಯಾಪಾರಸ್ಥರು ತಮ್ಮ ತಕ್ಕಡಿ, ತೂಕದಕಲ್ಲು ಪೂಜಿಸುತ್ತಾರೆ, ಹಾಗೆಯೇ ಮಹಿಳೆಯರು ಮನೆಯಲ್ಲಿರುವ ಕೈ ಹಾರಿ, ಒಳ್ಳು, ಒನಕೆ, ಕುಡುಗೋಲು, ಈಳಿಗೆ ಮನೆ ಪೂಜಿಸುತ್ತಾರೆ, ತಾಯಂದಿರು ಅವುಗಳ ಜೊತೆಗೆಲ್ಲ ನಮ್ಮ ಪಾಟಿ-ಪುಸ್ತಕಗಳನ್ನು ಇಡುತ್ತಿದ್ದರು, (ನನಗೇಕೆ ಖುಶಿಯೆಂದರೆ ಅವಗಳನ್ನೊದುವುದರಿಂದ ಒಂದು ದಿನ ಮುಕ್ತಿ ಸಿಗುತ್ತಿತ್ತಲ್ಲ ಅದಕ್ಕೆ). ನಮ್ಮ ಕಡೆ ಇದಕ್ಕೆ ‘ಖಂಡೆ ಪೂಜೆ’ ಎಂತಲೂ ಕರೆಯುತ್ತಾರೆ, ಇದರೊಂದಿಗೆ ನಂಟಿರುವ ಇನ್ನೊಂದು ನೆನಪೆಂದರೆ ತುಂಬಾ ಸಣ್ಣವರಿದ್ದಾಗ ಬಹುಶ: ಬಾಲವಾಡಿ ಅಥವಾ ೧ನೇ ಅಥವಾ ೨ನೇಯತ್ತಾ ಇದ್ದಾಗ ಪಾಟಿಯ ಮೇಲೆ ಸರಸ್ವತಿಯ ಚಿತ್ರ ಬರೆಯಿಸಿಕೊಂಡು ಶಾಲೆಗೆ ಒಯ್ದು ಅಲ್ಲಿ ಸರಸ್ವತಿ ಪೂಜೆಗೆ ನಮ್ಮ ಪಾಟಿಗಳನ್ನು ಸಾಲಾಗಿ ಗೋಡೆಗೆ ಒರಗಿಸಿ ಪೂಜಿಸುತ್ತಿದ್ದುದು, ನಂತರದ ದಿನಗಳಲ್ಲಿ ಪ್ರೈಮರಿಯಲ್ಲಿದ್ದಾಗ ಸರಸ್ವತಿ ಪೂಜೆಗೆ ಶಾಲೆಯಲ್ಲಿ ಹೆಂಗೆಳೆಯರು ತಂದುಕೊಟ್ಟ ಸೀರೆಗಳಿಂದ ಮಂಟಪ ಕಟ್ಟಿದ್ದು, ಊರ ಹೋರಗಿನ ತೋಟಗಳಿಂದ ಪೂಜೆಗೆ ಹೂವು, ಹಣ್ಣು, ಬಾಳೆಗಿಡ, ಕಬ್ಬಿನ ಗಿಡಗಳನ್ನು ತೋಟದ ಮಾಲಿಕರನ್ನು ಕೇಳಿ, ಕೊಡದಿದ್ದಾಗ ಕದ್ದು ತಂದದ್ದು ಹೀಗೆ ಆಯುಧ ಪೂಜೆಯ ಅನೇಕ ನೆನಪುಗಳು ನನ್ನ ಪ್ರೈಮರಿ ದಿನಗಳದ್ದು, ಹಾಯಸ್ಕೂಲಿಗೆ ಬಂದ ಮೇಲಿಂದ ಆಯುಧಪೂಜೆ ಕೆವಲ ಮನೆಗೆ ಸಿಮಿತವಾಯ್ತು.

ಬನ್ನಿ

ಬನ್ನಿ

 

ಮರುದಿನ ವಿಜಯದಶಮಿ, ಬೆಳಿಗ್ಗೆ ಬೇಗ ಎದ್ದು ಎಣ್ಣೆ ಸ್ನಾನ ಮಾಡಿ, ಬನ್ನಿ ಮಂಟಪಕ್ಕೆ ಹೋಗಿ ಪೂಜಿಸಿ “ಬಂಗಾರ” ಮನೆಗೊಯ್ಯುವುದು, ಆ ದಿನ ಮನೆಯಲ್ಲಿ ಹಬ್ಬದೂಟ ಗೋದಿ ಹುಗ್ಗಿ, ಹೋಳಿಗೆ, ಕರಗಡಬು ಇತ್ಯಾದಿ… (ಅssssss…ಬ್), ಸಂಜೆಗೆ ಮೊದಲು ಊರದೇವರಿಗೆ ಬನ್ನಿ ಮುಡಿಸಿ, ಮನೆಯಲ್ಲಿ ತಂದೆ-ತಾಯಿ-ಹಿರಿಯರಿಗೆಲ್ಲ ಬನ್ನಿ-ಬಂಗಾರ ಕೊಟ್ಟು “ಬಂಗಾರ ತಗೊಂಡು ಬಂಗಾರದಂಗ ಇರೂಣು” ಅನ್ನುವ ಗಿಳಿವಿಂಡು ಕಾರ್ಯಕ್ರಮ ಶುರು. ಗುಂಪುಗಳಲ್ಲಿ ಗೆಳೆಯರೆಲ್ಲ ಮನೆ-ಮನೆಗೆ ಭೇಟಿ ನಿಡುತ್ತಾ  ಬಂಗಾರ ತಗೊ ಕಾಕಾ, ಚಿಗವ್ವ, ದೊಡ್ಡಪ್ಪ, ಮಾಮಾ, ಅಕ್ಕಾ, ತಂಗಿ, ತಮ್ಮಣ್ಣಾ, ಅಜ್ಜಾ, ಅನ್ನುತ್ತಾ, ‘ಜಲ್ದಿ ಹಿಡಿಬೇ ಯಮ್ಮಾ ಗಟ್ಟಿ ಬಂಗಾರ’ ಎನ್ನುತ್ತಾ ಹಿರಿಯರಿಗೆಲ್ಲ ಅಡ್ಡ ಬಿಳುತ್ತಾ, ಆಶಿರ್ವಾದ ಕೇಳಿದ್ದೆ ಕೇಳಿದ್ದು.

ಆ ಹಿರಿಯರ ಆಶಿರ್ವಾದವೇ ಇರಬೇಕು ನಮ್ಮನ್ನೆಲ್ಲ ಇಷ್ಟು ತಣ್ಣಗಿಟ್ಟಿದ್ದು. ಅಂದ ಹಾಗೆ ತಗೋರಿ “ಬನ್ನಿ-ಬಂಗಾರ ತಗೊಂಡು ಬಂಗಾರದಂಗ ಇರೂಣು”

      
Categories: ಕನ್ನಡ ಪುಟಗಳು

ನನ್ನ ನೆನಪಾಗುವುದೇ ಇಲ್ಲವೇ?

Wed, 2008-09-24 14:24

ನಿಜ ಹೇಳು ಗೆಳತಿ, ನಿನಗೆ
ನನ್ನ ನೆನಪಾಗುವುದೇ ಇಲ್ಲವೇ?

ಮನೆಗೆಲವನ್ನೇಲ್ಲ ಮುಗಿಸಿ,
ಟಿ.ವಿ. ನೋಡುತ್ತಾ, ಮೈ ಮರೇತು
ನಿದ್ರೆಗೆ ಜಾರುವಾಗಲೆಲ್ಲ
ನಿಜ ಹೇಳು ಗೆಳತಿ, ನಿನಗೆ
ನನ್ನ ನೆನಪಾಗುವುದೇ ಇಲ್ಲವೇ?

ಸಂಜೆ ದೇವಸ್ಥಾನಕ್ಕೇ ಹೋದಾಗ
ದೇವರನ್ನಲ್ಲದೇ ಬೇರಾರಿಗೊ
ಕಾಯುತ್ತಿರುವ ಆ ಹುಡುಗನನ್ನು ನೋಡಿದಾಗ
ನಿಜ ಹೇಳು ಗೆಳತಿ, ನಿನಗೆ
ನನ್ನ ನೆನಪಾಗುವುದೇ ಇಲ್ಲವೇ?

ಗುರುಗುಟ್ಟುವ ಬೈಕಿನಲ್ಲಿ ಮೈಗೇ
ಮೈ ಅಂಟಿಕೊಂಡು ಕುಳಿತಿರುವ
ಜೋಡಿಯೋಂದು ಕಣ್ಮುಂದೆ ಬಂದಾಗ
ನಿಜ ಹೇಳು ಗೆಳತಿ, ನಿನಗೆ
ನನ್ನ ನೆನಪಾಗುವುದೇ ಇಲ್ಲವೇ?

ನೀ ಮಾಡಿದ ಅಡುಗೆ ಹೇಗಿದೆಯೆಂದು
ಹೇಳದೆ, ತುಟಿಗೇ ನಗು ತಾರದೇ,
ಹಾಗೆಯೆ ನಿನ್ನವನೇದ್ದು ಹೋದಾಗ
ನಿಜ ಹೇಳು ಗೆಳತಿ, ನಿನಗೆ
ನನ್ನ ನೆನಪಾಗುವುದೇ ಇಲ್ಲವೇ?

ನೀ ಕಲಿಸಿಟ್ಟ ಅನ್ನ-ತುಪ್ಪುಪ್ಪು
ತಿನ್ನದೇ, ಉಪ್ಪಿನಕಾಯಿಗಾಗಿ
ನಿನ್ನ ಮಗ ಹಠ ಮಾಡಿದಾಗ
ನಿಜ ಹೇಳು ಗೆಳತಿ, ನಿನಗೆ
ನನ್ನ ನೆನಪಾಗುವುದೇ ಇಲ್ಲವೇ?

ನಿಜ ಹೇಳು ಗೆಳತಿ, ನೀನು
ನನ್ನ ಮರೆತಿದಿದ್ದಾದರು ಹೇಗೆ?
ನನಗೂ ಮರೆಯಬೇಕಿದೆ ಹಾಗೆ.

(ಈ ಕವನ ಗೆಳಯ ಅರವಿಂದ ಅವರು ಕೊಟ್ಟ ಸ್ಪೂರ್ತಿಯಿಂದ…)

      
Categories: ಕನ್ನಡ ಪುಟಗಳು

ಇಲ್ಲಿ ನೀನ್ಯಾರು, ನಾನ್ಯಾರು?

Thu, 2008-09-18 09:04

ಅವಳ ನೆನಪಿನ ಬಸಿರು
ದಿನಾ ಹೆರುತ್ತಲೇ ಇದೆ
ನೂರಾರು ಕೂಸು-ಕುನ್ನೆಗಳ,
ಮದುವೆಯಾಗಿ ವರ್ಷಗಳೂರುಳಿದರೂ
ತುಂಬುತ್ತಿಲ್ಲ ಅವಳ ಒಡಲು ಗಂಡ-
ನೊಟ್ಟಿಗೆ ಆಸ್ಪತ್ರೆಗಳಿಗೆ ದಿನಾ ಸುಳಿಗಳು

ತೊಂದರೆ ಕಾಣುತ್ತಿಲ್ಲ ಡಾಕ್ಟರರಿಗೆ
ಅವರ ದೊಡ್ಡ ದೊಡ್ಡ ಯಂತ್ರಗಳಿಗೆ
ನೂರಾರು ಸಾವಿರದ ಟೇಸ್ಟುಗಳಿಗೆ,
ಮತ ಎಣಿಕೆಯ ಹಾಗೆ ಎನಿಸಿದ್ದು
ಆಯಿತು, ಅವನ ಗಂಡುಸುತನದ
ಗುರುತುಗಳನ್ನು, ಸುಳಿವೇ ಇಲ್ಲ

ಅವಳಿಗಾದರೂ ತಿಳಿಯಬಾರದೇ,
ಟೇಸ್ಟುಬಿನಲ್ಲಿ ಬೇಬಿ ಬೇಕಂತೆ.
ಬರಿ ಗರ್ಭವಿದ್ದರೇ ಎನಾಯ್ತು
ಮನಸು ಬೇಕಲ್ಲ ಜೋತೆಗೆ.

ಅವಳ ಗಂಡ ಸಿಕ್ಕಿದ್ದ, ಕೊಟ್ಟೆ ಅವನಿಗೆ
ಅವಳ ಮನಸನ್ನ, ಅವನೂ ಯಾರಿಗೊ
ಎನೋ ಮರಳಿಸಲು ಬಂದಿದ್ದಂತೆ, ಈ
ದೊಡ್ಡ ಊರಿನಲ್ಲಿ ಕಷ್ಟಗಳು ನೂರಾರು
ಹೀಗಾಗಿ ಇಲ್ಲಿ ನೀನ್ಯಾರು, ನಾನ್ಯಾರು?

Categories: ಕನ್ನಡ ಪುಟಗಳು

ಸಾಕಾಗಿದೆ ಈ ಒಂಟಿ ಬದುಕು, ಎಲ್ಲಿರುವೆ ಗೆಳತಿ ಒಮ್ಮೆಯಾದರೂ ಸಿಗು

Sun, 2008-09-07 13:55

ನನ್ನೊಳಗಿರುವ ನಿನಗೂ
ನಿನ್ನೊಳಗಿರುವ ನನಗೂ
ಎನೂ ಸುಖವಿಲ್ಲ ಗೆಳತಿ,
ನಿನಲ್ಲಿ, ನಾನಿಲ್ಲಿ
ಮಾತು ಬರಿ ಮೊಬೈಲಿನಲ್ಲಿ
ನೋಟ ನಿನ್ನ e-ಮೇಲಿನಲ್ಲಿ.

 
ಈ ಎಸ್ಸೆಮ್ಮೆಸ್ಸು, ಇ-ಮೇಲು
ಈ ಚಾಟು, ಗೆಳತಿ ಇಷ್ಟಿಷ್ಟೆ ಸಾಕಾಗಿದೆ,
ಒಮ್ಮೆ ಇಡಿಯಾಗಿ ಸಿಗು
ನಿನ್ನ ನಗು, ಆ ಮಾತು
ನಿನ್ನ ತೊಳತೆಕ್ಕೆಯಲ್ಲಿ ಕರಗಬೇಕಿದೆ.

 

ನೀ ನಿಂತಲ್ಲೆ ನದಿಯಾದೆ,
ಎದ್ದುಹೋದರೆ ಅಲೆಯಾದೆ,
ಅದಾವುದು ನನಗಿಷ್ಟವಿಲ್ಲ.
ನೀ ಎದ್ದು ಹೋದಮೇಲೂ
ಉಳಿದಿತ್ತಲ್ಲ ನಿನ್ನ ಮೈಯ ಘಮ
ಅದು ನನಗಿಷ್ಟ, ಅದು ನೀನಾಗು.

Categories: ಕನ್ನಡ ಪುಟಗಳು

ಗಣಪತಿ ಬಪ್ಪಾ ಮೊರಯ್ಯ

Wed, 2008-09-03 11:14

Categories: ಕನ್ನಡ ಪುಟಗಳು

Planet Kannada brought to you by Sampada Community via Sampada Foundation.
Setup and designed by Hari Prasad Nadig.

separator